Sat,Oct18,2025
ಕನ್ನಡ / English

ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ! | JANATA NEWS

13 Feb 2023

ವಿಜಯಪುರ : ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದು ಡೆತ್​ನೋಟ್ ಬರೆದಿಟ್ಟು ಸಿಂದಗಿ ತಹಶೀಲ್ದಾರ್ ಕಚೇರಿಯ ಆವರಣದ ಮರಕ್ಕೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಆತ್ಮಹತ್ಯೆಗೆ ಶರಣಾದವರು. ಶಿಕ್ಷಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್.ಎಲ್.ಭಜಂತ್ರಿ, ಸಿಂದಗಿ ಬಿಇಓ, ಸಿಆರ್​ಪಿ ಜಿ.ಎನ್.ಪಾಟೀಲ್ ಅವರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ.

ಡೆತ್​ ನೋಟ್​ನಲ್ಲಿ ಏನಿದೆ?

ಎಸ್​ ಎಲ್ ಭಜಂತ್ರಿ ಮುಖ್ಯಶಿಕ್ಷಕ ಹುದ್ದೆಯನ್ನು, ಶಿಕ್ಷಕ ಬಸವರಾಜಗೆ ವರ್ಗಾಯಿಸಿದ್ದರು. ಈ ವೇಳೆ ಶಿಕ್ಷಕರ, ಹಾಗೂ ಮಕ್ಕಳ ಹಾಜರಾತಿ ದಾಖಲಿಸುವ 1ನೇ ನಂಬರ್ ರಿಜಿಸ್ಟರ್​ನ್ನು ಹಸ್ತಾಂತರ ಮಾಡಿದ್ದರು. ಆದರೆ ಭಜಂತ್ರಿ ವಿದ್ಯಾರ್ಥಿಗಳ ದಾಖಲಾತಿ ವಿವರ, ಜಾತಿ, ಜನ್ಮ ದಿನಾಂಕಗಳನ್ನು 1ನೇ ನಂಬರ್ ರಿಜಿಸ್ಟರ್​ ಸರಿಯಾಗಿ ದಾಖಲಿಸದೇ,​ ಅಪೂರ್ಣ ರೀತಿಯಲ್ಲಿ ವರ್ಗಾಯಿಸಿದ್ದರು.

ಈ ಸಂಬಂಧ ಎಸ್​ ಎಲ್ ಭಜಂತ್ರಿಯನ್ನು, ಶಿಕ್ಷಕ ಬಸವರಾಜ್​ ಪ್ರಶ್ನಿಸಿದರೇ “ನಾನು ಸಿಆರ್​ಪಿ ಆಗುತ್ತೇನೆ, ಆಗಾಗ ಬಂದು 1ನೇ ನಂಬರ್ ರಿಜಿಸ್ಟರ್ ಸರಿಪಡಿಸುವುದಾಗಿ ಹೇಳಿದ್ದರು. ಆದರೆ ಹಿಂದಿನ ಮುಖ್ಯ ಶಿಕ್ಷಕ ಎಸ್ ಎಲ್ ಭಜಂತ್ರಿ ರಿಜಿಸ್ಟರ್​ನ್ನು ಸರಿಪಡಿಸದೇ ಸತಾಯಿಸುತ್ತಿದ್ದರು. ಈ ಬಗ್ಗೆ ಸಿಂದಗಿ ಬಿಇಓ ಗಮನಕ್ಕೂ ತಂದಿದ್ದರೂ ಪ್ರಯೋಜನವಾಗಿಲ್ಲ. ಇದಕ್ಕೆ ಪ್ರತಿಯಾಗಿ ಬಿಇಓ ಹೆಚ್ ಎಂ ಹರಿನಾಳ ಟಾರ್ಚರ್ ನೋಟಿಸ್ ಕೊಡುತ್ತಿದ್ದನು. ಸಾಸಾಬಳ ಶಾಲೆಯ ಸಹಶಿಕ್ಷಕ ಶಿಕ್ಷಕ ಬಿಎಂ ತಳವಾರ ನಿಂದಲೂ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ನನ್ನ ಮೇಲೆ ಅಲಿಗೆಷನ್ ಮಾಡಿ, ಗ್ರಾಮದ ಸಂಗಮೇಶ್ ಚಿಂಚೋಳಿ ಎಂಬುವರು ಹಾಗೂ ಸಿಆರ್​ಪಿ ​​ನನ್ನಿಂದ ಹಣ ಪಡೆದಿದ್ದರು. ಹಾಗೇ ಬಿಸಿಯೂಟ ಯೋಜನೆಯಗೆ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದರು. ಶಿಕ್ಷಕ ಬಸವರಾಜ್ ವಿರುದ್ಧ ಸಂಗಮೇಶ್ ಚಿಂಚೋಳಿ ಬಿಇಓಗೆ ದೂರು ಕೊಟ್ಟಿದ್ದರು. ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ. ನನ್ನ ಹೆಂಡತಿ ಓರ್ವ ಮಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಡೆತ್ ನೋಟ್​​ನಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಡೆತ್ ನೋಟಿನಲ್ಲಿ ಬಸವರಾಜ ಉಲ್ಲೇಖಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ಹರನಾಳ, ಜಿ.ಎನ್ ಪಾಟೀಲ, ಎಸ್.ಎಲ್.ಬಜಂತ್ರಿ, ಸಂಗಮೇಶ ಚಿಂಚೊಳ್ಳಿ, ಎಸ್.ಎಲ್.ಬಜಂತ್ರಿ, ಬಿ.ಎಂ.ತಳವಾರ ಅವರುಗಳೇ ನನ್ನ ಗಂಡನ ಸಾವಿಗೆ ನೇರ ಕಾರಣ ಎಂದು ಪತ್ನಿ ಮಹಾದೇವಿ ಬಸವರಾಜ ನಾಯಕಲ್ ಸಿಂದಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Unable to bear the harassment of the authorities, the teacher committed suicide

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...