Sat,Oct18,2025
ಕನ್ನಡ / English

ಜೈನ ಮುನಿ ಪ್ರಕರಣ: ಕಠಿಣ ಶಿಕ್ಷೆ ಎಂದರೆ ಏನು? ಆರೋಪಿಗಳಿಗೆ ಯೋಗಿ ಮಾದರಿಯಲ್ಲಿ ಅವರ ಮೇಲೆ ಕ್ರಮ ಆಗಬೇಕು | JANATA NEWS

11 Jul 2023

ಹುಬ್ಬಳ್ಳಿ : ಕರ್ನಾಟಕ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಠಿಣ ಶಿಕ್ಷೆ ಎಂದರೆ ಏನು? ನಮ್ಮ ಸಿಸ್ಟಮ್ ಸರಿ ಇಲ್ಲ. ಒಂದು ವರ್ಷದಲ್ಲಿ ಅವರು ಹೊರಗೆ ಬರುತ್ತಾರೆ. ಉತ್ತರಪ್ರದೇಶ ಮಾದರಿಯಲ್ಲಿ ಮೂವರು ಆರೋಪಿಗಳ ಮನೆಗೆ ಬುಲ್ಡೋಜರ್ ಹತ್ತಿಸಬೇಕು. ಕ್ರೌರ್ಯ ಕ್ರೌರ್ಯವೇ. ಅವರು ಯಾರೇ ಆಗಲಿ ಅವರ ಮನೆ ಮೇಲೆ ಬುಲ್ಡೋಜರ್ ಹತ್ತಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಮಕುಮಾರ ನಂದಿ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಆದರೆ, ಸಿಬಿಐ ಕೇವಲ ಬುರುಡೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂದೂಗಳ ಹತ್ಯೆ ಪ್ರಕರಣಗಳನ್ನು ಸಿಬಿಐಗೆ ಕೊಟ್ಟರು, ನಂತರ ಏನಾಯ್ತು? 22 ಪ್ರಕರಣಗಳಿಗೆ ನ್ಯಾಯ ಸಿಕ್ಕಿದೆಯೇ ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ ಸರ್ಕಾರ ಬಂದ ಮೇಲೆ ಹಿಂದೂ ವಿರೋಧಿ ವಾತಾವರಣ ಸೃಷ್ಠಿಯಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಆತಂಕ ಇತ್ತು. ಬಿಜೆಪಿ ಸರ್ಕಾರವಿದ್ದಾಗಲೂ ಹಿಂದೂ ಕಾರ್ಯಕರ್ತರ ಹತ್ಯೆ ಆಗಿದೆ. ಅದಕ್ಕಾಗಿ ಬಿಜೆಪಿಯವರನ್ನು ಕರ್ನಾಟಕದಲ್ಲಿ ನೆಲಸಮ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್​ ಮುತಾಲಿಕ್​ ಹೇಳಿದ್ದಾರೆ.

ಹೀರೆಕುಡಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ತಾಲೂಕಿನ ವರೂರ್ ಜೈನ್ ಮಂದಿರಕ್ಕೆ ಭೇಟಿ ನೀಡಿದ ಮುತಾಲಿಕ್ ಜೈನಮುನಿ ಗುಣಧರನಂದಿ ಮಹಾರಾಜ್ ಅವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕಾಮಕುಮಾರ ನಂದಿ ಶ್ರೀಗಳ ಹಿನ್ನೆಲೆ ಬಗ್ಗೆ ಚರ್ಚೆ ಮಾಡಿದ ಅವರು, ಜೈನ ಧರ್ಮದ ಜೊತೆಗೆ ಹಿಂದೂಪರ ಸಂಘಟನೆಗಳು ಇವೆ ಎಂಬ ಭರವಸೆಯನ್ನು ನೀಡಿದರು.

ಪರೇಶ್ ಮೇಸ್ತಾ ಪ್ರಕರಣ ಯಾವ ಹಂತದಲ್ಲಿದೆ?22 ಕೇಸ್‌ಗಳಿಗೆ ನ್ಯಾಯ ಸಿಕ್ಕಿದೆಯಾ? ಬಿಜೆಪಿಯವರು ಇದೀಗ ಸಿಬಿಐಗೆ ವಹಿಸಿ ಎಂದು ಹೇಳುತ್ತಿದ್ದಾರೆ. ಇವರೇನು ಸಾಚಾಗಳಾ? ರಾಜಕಾರಣಿಗಳು ನಿರ್ಲಜ್ಜರು. ನಾನು ಹಿಂದೂತ್ವ ಉಳಿಸಲು ರಾಜಕಾರಣಕ್ಕೆ ಬಂದಿದ್ದೇನೆ. ರಾಜಕಾರಣ ಮಾಡಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

ಜೈನ ಸ್ವಾಮೀಜಿಯ ಹತ್ಯೆ ನಾವು ಖಂಡಿಸುತ್ತೇವೆ. ನಾನು ಅಲ್ಲಿಗೆ ಭೇಟಿ ಕೊಟ್ಟು ಬಂದಿದ್ದೇನೆ. ಮಠದಲ್ಲಿ ಸ್ವಾಮೀಜಿ ಒಬ್ಬರೇ ಇರುತ್ತಿದ್ದರು. ಹೀರೆಕುಡಿಯಿಂದ ಮಠ ಸುಮಾರು 2 ಕಿಲೋ ಮೀಟರ್ ದೂರ ಇದೆ. ಒಂಟಿತನ ನೋಡಿ ವ್ಯವಸ್ಥಿತವಾಗಿ ಕೊಲೆ ಮಾಡಿದ್ದಾರೆ. ಈ ಕೊಲೆ ಸಾಮಾನ್ಯ ಕೊಲೆ ಅಲ್ಲ. ಕುರಿ, ಕೋಳಿ ಕತ್ತರಿಸುವ ರೀತಿಯಲ್ಲಿ ಹತ್ಯೆ ಮಾಡಿದ್ದಾರೆ.

ಘಟನೆಯ ಸಂಪೂರ್ಣ ಮಾಹಿತಿಯನ್ನು ಸರ್ಕಾರ ಹೊರ ಹಾಕಬೇಕು. ಇದರ ಹಿಂದೆ ಹಣದ ಕಾರಣ ಇಲ್ಲ, ಬೇರೆ ಏನೋ ಷಡ್ಯಂತ್ರ ಇದೆ. ಕರ್ನಾಟಕ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮಾದರಿಯಲ್ಲಿ ಮೂರು ಆರೋಪಿಗಳ ಮನೆಗೆ ಬುಲ್ಡೋಜರ್ ಹತ್ತಿಸಬೇಕು.

ಕೊಲೆಗಾರರದ್ದು ತಾಲಿಬಾನ್ ಮನಸ್ಥಿತಿ. ಇದರಲ್ಲಿ ಮುಚ್ಚು ಮರೆ ಮಾಡಿದರೆ ದೇಶಕ್ಕೆ ಅಪಾಯಕಾರಿ. ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಎಲ್ಲರೂ ಬಾಯಿ ಮುಚ್ಚಿ. ತನಿಖೆಗೆ ಮುಕ್ತ ಅವಕಾಶ ಕೊಡಬೇಕು. ಯಾರೂ ಯಾವುದೇ ಒತ್ತಾಯಕ್ಕೆ ಮಣಿಯಬಾರದು. ಯೋಗಿ ಮಾದರಿಯಲ್ಲಿ ಅವರ ಮೇಲೆ ಕ್ರಮ ಆಗಬೇಕು. ಯಾರೂ ಅವರ ಪರ ವಕಾಲತ್ತು ಮಾಡಬಾರದು ಎಂದು ನಾನು ವಕೀಲರ ಸಂಘಕ್ಕೆ ಮನವಿ ಮಾಡುತ್ತೇನೆ. ಎಂದು ಪ್ರಮೋದ್ ಮುತಾಲಿಕ್ ಹೇಳಿದರು.

RELATED TOPICS:
English summary :The CBI is only concerned with the killing of Hindu activists in both the Burude, Congress and BJP governments

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...